ಬಿಎಸ್ ವೈ ರಾಜೀನಾಮೆಗೆ ಶಾಸಕ ಯತ್ನಾಳ್ ಆಗ್ರಹ

Advertisement

ನಾನು ಸಿಎಂ ಆದರೆ ಜೈಲಿಗೊಬ್ಬರು, ಕಾಡಿಗೆ ಒಬ್ಬರು ಹೋಗಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾರ್ಮಿಕವಾಗಿ ಹೇಳಿದ್ದಾರೆ. ವಿಧಾನಸೌಧ ದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಯತ್ನಾಳ್, ಎಷ್ಟೇ ದೊಡ್ಡ ಹುಲಿ ಇದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ.

ರಾಜಾಹುಲಿ ಇರ್ಲಿ, ಯಾರೇ ಇರ್ಲಿ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು. ಎಲ್.ಕೆ. ಅಡ್ವಾಣಿ , ವಾಜಪೇಯಿಗಿಂತ ದೊಡ್ಡವ್ರಾ ಅವರು? ಎಲ್.ಕೆ. ಅಡ್ವಾಣಿ ಆದರ್ಶ ಪಾಲಿಸಲಿ. ಕೇಂದ್ರೀಯ ಸಂಸದೀಯ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ನೀಡುವಂತೆ ಯತ್ನಾಳ್ ಆಗ್ರಹಿಸಿದರು. ಕಾಂಗ್ರೆಸ್ ನವರಿಗೆ ಬೊಮ್ಮಾಯಿ ಭಯ ಇಲ್ಲ, ಯಡಿಯೂರಪ್ಪ ಭಯ ಇಲ್ಲ. ಅವರಿಗೆ ನನ್ನ ಭಯ. ಯತ್ನಾಳ್ ಎಲ್ಲಿ ಬಂದು ಬಿಡ್ತಾನೋ..? ಅನ್ನೋ ಭಯ ಅವರಿಗೆ ಎಂದು ಹೇಳಿದರು. ಯತ್ನಾಳ್ ಸಿಎಂ ಆದ್ರೆ ಜೈಲಿಗೊಬ್ಬರು, ಕಾಡಿಗೆ ಒಬ್ಬರು ಹೋಗಬೇಕಾಗುತ್ತೆ. ತಿಹಾರ್ ಜೈಲಿನಲ್ಲಿ ಯಾವ ಬಂಡೆನೂ ಇಲ್ಲ, ಪಂಡೆನೂ ಇಲ್ಲ,ಸಂಡೇ ಅಷ್ಟೇ ಎಂದು ಹೇಳಿದ್ರು.