ಸಿಪಿಐ ಅಮಾನತು: ಹೋರಾಟ ತಾತ್ಕಾಲಿಕ ಸ್ಥಗಿತ

ಸಿಪಿಐ ಅಮಾನತು
Advertisement

ಬಾಗಲಕೋಟೆ: ಸಿಪಿಐ ಕರಿಯಪ್ಪ ಬನ್ನೆ ಸೇರಿದಂತೆ ಇತರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗಹಿಸಿದ್ದ ಹಿಂದೂ ಜಾಗರಣ ವೇದಿಕೆ ಸೋಮವಾರದಿಂದ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿತ್ತು. ಆದರೆ ಸಿಪಿಐ ಬನ್ನೆ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿರುವ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ತಿಳಿಸಿದರು.
ರವಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸಂಘಟಿತವಾದರೆ ನ್ಯಾಯ ದೊರೆಯುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂದರು. ಡಿವೈಎಸ್‌ಪಿ ಪ್ರಶಾಂತ್ ಮುನೊಳಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ದೌರ್ಜನ್ಯಕ್ಕೆ ಒಳಗಾಗಿರುವವರು ದೂರಿನಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದೇವೆ. ಪ್ರಶಾಂತ್ ಮುನೊಳಿ ಈ ಭಾಗ ಡಿವೈಎಸ್‌ಪಿ ಆಗಿರುವುದರಿಂದ ಅವರು ಎಸ್‌ಪಿಗೆ ವರದಿ ಸಲ್ಲಿಸಿರುತ್ತಾರೆ. ಅದಕ್ಕೆ ಅವರ ಹೆಸರು ಪ್ರಸ್ತಾಪಿಸಲಾಗಿತ್ತು ಎಂದರು.
ಸಿಪಿಐ ಬನ್ನೆ ಅಮಾನತು ಪ್ರಕರಣದ ಸಂಘಟಿತ ಸಮಾಜದ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ನೊಂದ ಯುವಕರ ಮೇಲೆ ಕೇವಲ ಒಬ್ಬ ಅಧಿಕಾರಿ ಮಾತ್ರವೇ ದೌರ್ಜನ್ಯ ಎಸೆಗಿಲ್ಲ. ಇತರ ಮೂವರು ಪಿಎಸ್‌ಐಗಳ ಮೇಲೂ ಕ್ರಮಕೈಗೊಳ್ಳಬೇಕು ಎಂದರು.