ಬೆಂಗಳೂರು: ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದಾರೆ. ಸಭೆ ಬಳಿಕ ಮುಷ್ಕರದ ಕುರಿತು ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಅಧಿಕೃತ ಸರಕಾರಿ ಆದೇಶ ನೀಡಬೇಕು. ಈ ಹಿಂದೆಯೂ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ, ನಮಗೆ ಅಧಿಕೃತ ಆದೇಶ ನೀಡದ ಹೊರತು ಹಿಂದೆ ಸರಿಯುವುದಿಲ್ಲ ಎಂದರು.