ಬೆಂಗಳೂರು: ಶಕ್ತಿ ಯೋಜನೆಯು ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದು ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ಬಹಳ ಅನುಕೂಲವಾಗುವುದರ ಜೊತೆಗೆ ಸಾರಿಗೆ ಇಲಾಖೆ ಮತ್ತಷ್ಟು ಶಕ್ತಿಶಾಲಿಯಾಗಿದೆ. ಯೋಜನೆಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುತ್ತಿರುವುದರಿಂದ ಯೋಜನೆ ಅಬಾಧಿತ. ಯಾವುದೇ ನಿರ್ಬಂಧಗಳೂ ಇಲ್ಲದೆ ಶಕ್ತಿ ಯೋಜನೆಯ ಉದ್ದೇಶ ಸಾಕಾರಗೊಳಿಸಲು ಸರ್ಕಾರ ಬದ್ದವಾಗಿದೆ ಎಂದಿದ್ದಾರೆ.