ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ದರ್ಶನ್ ಸ್ನೇಹಿತ ವಿ.ವಿನಯ್, ದರ್ಶನ್ ಮ್ಯಾನೇಜರ್ ಆರ್ ನಾಗರಾಜು, ಎಂ.ಲಕ್ಷ್ಮಣ್, ಎಸ್ ಪ್ರದೋಶ್, ಕೆ.ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವ ಮೂರ್ತಿ, ರಾಘವೇಂದ್ರ ಅಲಿಯಾಸ್ ರಾಘು ಬಂಧಿತ ಆರೋಪಿಗಳಾಗಿದ್ದು, ಹೆಚ್ಚಿನವರು ದರ್ಶನ್ ಬಾಡಿಗಾರ್ಡ್ಸ್ ಆಗಿದ್ದಾರೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್ ಇನ್ನಿತರ ಟೆಸ್ಟ್ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.