ಬಹಿರಂಗ ಚರ್ಚೆಗೆ ಸಮಯ ನಿಗದಿಪಡಿಸಿ

Advertisement

ಬೆಂಗಳೂರು: ನ. 1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ನಿಗದಿಪಡಿಸಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್​ 1ರ ನಂತರ “ಎನೀ ಟೈಮ್​ ಚರ್ಚೆಗೆ ಟೈಮ್​ ಫಿಕ್ಸ್​ ಮಾಡಿ. ನಾನು ಏನು ಮಾಡಿದ್ದೇನೆ, ಅವರೇನು ಮಾಡಿದ್ದಾರೆ ಅನ್ನೋದನ್ನು ಅಲ್ಲೇ ಬಿಚ್ಚಿ ಮಾತಾಡೋಣ. ಗಾಳಿಯಲ್ಲಿ ಗುಂಡು ಹೊಡೆಯೋದು, ಹಿಟ್​ ಆಂಡ್​ ರನ್​ ಮಾಡೋದಲ್ಲ” ಸಮಯ ಫಿಕ್ಸ್​ ಮಾಡಿ. ಅಲ್ಲಿ ಬಂದು ಎಲ್ಲವನ್ನೂ ಮಾತಾಡೋಣ ಎಂದರು.