ಮಂಡ್ಯ ಜಿಲ್ಲೆಯ ಇಬ್ಬರು ಇಂಜಿನಿಯರ್ ಫಾರ್ಮ್ ಹೌಸ್ ಮೇಲೆ ಲೋಕಾ ದಾಳಿ

Advertisement

ಮಂಡ್ಯ: ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದ್ದು,ಇಂಜಿನಿಯರ್ ಗಳ ಮನೆಗಳಲ್ಲಿ ದಾಖಲಾತಿ ಪರಿಶೀಲನೆ ಕೈಗೊಂಡಿದ್ದಾರೆ.
ಮಳವಳ್ಳಿ ಮತ್ತು ಮದ್ದೂರು ತಾಲೂಕಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದು. ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿ ಇಂಜಿನಿಯರ್ ಬಾಲರಾಜು ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ರವರ ಮನೆಗಳಲ್ಲಿ ಶೋಧ ನಡೆಸಿದರು.
ಇಂಜಿನಿಯರ್ ಬಾಲರಾಜು ಸ್ವ
ಗ್ರಾಮ ಮಳವಳ್ಳಿ ತಾಲೂಕಿನ ನಂಜೇಗೌಡನ ದೊಡ್ಡಿಯ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿ ಸುಚಿತ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದರು
ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.