ಮಳವಳ್ಳಿ ಎಂಜಿನಿಯರ್ ಫಾರ್ಮ್ ಹೌಸ್‌ನಲ್ಲಿ ಲೋಕಾಯುಕ್ತ ದಾಳಿ

Advertisement

ಮೈಸೂರೂ: ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಬಾಲರಾಜ್ ಅವರ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಮಳವಳ್ಳಿ ತಾಲ್ಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ಫಾರಂ ಹೌಸ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮದ ಕೊಳಚೆ ನಿರ್ಮೂಲನೆ ಮಂಡಳಿ ಎಕ್ಸಿಕ್ಯುಟಿವ್ ಇಂಜಿನಿಯರ್ ಬಾಲರಾಜ್ ರವರ ಫಾರಂ ಹೌಸ್ ಮೇಲೆ ಮಂಡ್ಯ ಲೋಕಾಯುಕ್ತ ಎಸ್ ಪಿ ಸಜೀತ್ ನೇತೃತ್ವದಲ್ಲಿ ದಾಳಿ ನಡೆದಿದ್ದು. ಅಧಿಕಾರಿಗಳು ಮನೆಯನ್ನು ಪರಿಶೀಲನೆ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ :-ಪ್ರತಾಪ್. ಎ. ಬಿ