ಬೆಂಗಳೂರು: ನುಡಿದಂತೆ ನಡೆಯದ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರು ತಿಳಿಯಬೇಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರಕಾರದ ವೈಪಲ್ಯಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, “ಸಮೃದ್ಧವಾಗಿದ್ದ ಕರ್ನಾಟಕದ ಸ್ಥಿತಿಯನ್ನು ಸಂಪೂರ್ಣ ಹಾಳು ಮಾಡಿದ್ದಲ್ಲದೆ, ಜನರ ಏಳಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಯೋಚನೆ – ಯೋಜನೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರಕಾರದ ಕಡೆ ಬೆರಳು ತೋರಿಸುತ್ತಿರುವುದು ಹಾಸ್ಯಾಸ್ಪದ ನುಡಿದಂತೆ ನಡೆಯದ ಕಾಂಗ್ರೆಸ್ ಸರಕಾರದ ವೈಫಲ್ಯವನ್ನು ಜನರು ತಿಳಿಯಬೇಕಿದೆ
- ರಾಜ್ಯದ ಭವಿಷ್ಯದ ಯೋಚನೆಯಿಲ್ಲದೆ ಅರ್ಥಹೀನ ಬಿಟ್ಟಿ ಭಾಗ್ಯ ಘೋಷಣೆ ಮತ್ತು ರಾಜ್ಯದ ಆರ್ಥಿಕ ವ್ಯವಸ್ಥೆಗೆ ಕಂಟಕ
- 10 ವರ್ಷದ ಯುಪಿಎ ಆಡಳಿತ ಮತ್ತು 9 ವರ್ಷದ ಬಿಜೆಪಿ ಆಡಳಿತದಲ್ಲಿ ಕರ್ನಾಟಕಕ್ಕೆ ಅತೀ ಹೆಚ್ಚು ಅನುದಾನ ಒದಗಿಸಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ.
- 2014-19ರಲ್ಲಿ ಕರ್ನಾಟಕಕ್ಕೆ ₹1.35 ಲಕ್ಷ ಕೋಟಿಯಷ್ಟು ತೆರಿಗೆ ಹಂಚಿಕೆಯಾಗಿದೆ, ಯುಪಿಎ ಆಡಳಿತಕ್ಕೆ ಹೋಲಿಸಿದರೆ ಇದು 2.5 ಪಟ್ಟು ಹೆಚ್ಚಿದೆ
- ರಾಜ್ಯದ ನೀರಾವರಿ ವ್ಯವಸ್ಥೆ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಜನರ ದಿಕ್ಕು ತಪ್ಪಿಸುವ ಪ್ರಯತ್ನ
- ಕಳಸಾ ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಈಗಾಗಲೇ ಡಿಪಿಆರ್ ಅನುಮೋದಿಸಿದ್ದು, ರಾಜ್ಯ ಸರ್ಕಾರ ಮಾಹಿತಿ ನೀಡುವಲ್ಲಿ ವಿಫಲವಾಗಿದೆ
- ಅಟಲ್ ಭುಜಲ್ ಯೋಜನೆಯಡಿ ಕೇಂದ್ರ ಸರಕಾರವು ಕರ್ನಾಟಕಕ್ಕೆ ₹ 629.54 ಕೋಟಿ ಬಿಡುಗಡೆ ಮಾಡಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರ ಅದರಲ್ಲಿ ಬಳಸಿರುವುದು ಕೇವಲ ₹ ₹ 274.05 ಕೋಟಿ ಮಾತ್ರ (28.10.2023ರವರೆಗೆ)
- 2007 ರಲ್ಲಿ ಗೋವಾದಲ್ಲಿ ನಿಂತು ಮಹದಾಯಿ ವಿಚಾರವಾಗಿ ಮಾತನಾಡಿದ ಸೋನಿಯಾ ಗಾಂಧಿ, ಕರ್ನಾಟಕಕ್ಕೆ ಒಂದು ಹನಿ ನೀರನ್ನೂ ಬಿಟ್ಟುಕೊಡುವುದಿಲ್ಲ ಎಂದಿದ್ದರು, ಆದರೆ ಇಂದು ಅದೇ ವಿಚಾರವಾಗಿ ರಾಜ್ಯದಲ್ಲಿ ವಿವಾದ ಹುಟ್ಟು ಹಾಕುವ ಪ್ರಯತ್ನ ಮಾಡುತ್ತಿದ್ದೀರಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಮ್ಮ ಸರಕಾರ ಗೋವಾ ಸರಕಾರದ ಜೊತೆ ಚರ್ಚಿಸಿದ ನಂತರ ಕರ್ನಾಟಕಕ್ಕೆ ನೀರು ಹರಿಸಲು ಒಪ್ಪಿಕೊಂಡಿತ್ತು ಸಿದ್ದರಾಮಯ್ಯನವರೇ, ನಿಮ್ಮ ಎಲೆಯಲ್ಲಿ ಏನು ಬಿದ್ದಿದೆ ನೋಡಿ ನಂತರದಲ್ಲಿ ಕೇಂದ್ರ ಸರಕಾರದ ಕಡೆ ಬೆರಳು ಮಾಡಿ ತೋರಿಸುವಿರಂತೆ! ಎಂದು ಕುಟುಕಿದ್ದಾರೆ.