ಬಾಗಲಕೋಟೆ: ವಿಧಾನಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತೇರದಾಳ ವಿಧಾನಸಭಾ ಕ್ಷೇತ್ರಾದ್ಯಂತ 8 ಮತ ಯಂತ್ರಗಳಿಂದ ಆಯಾ ನಗರ ಹಾಗು ಗ್ರಾಮೀಣ ಪ್ರದೇಶದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು.
ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಸೋಮವಾರ ಪೇಟೆಯ ಶಂಕರಲಿಂಗ ದೇವಸ್ಥಾನದಲ್ಲಿ ವಲಯ ಅಧಿಕಾರಿ ಸುನೀಲ ಸಂಕ್ರಟ್ಟಿ, ಬಿ.ಎಸ್. ಕೋಲಕಾರ ಪ್ರಾತ್ಯಕ್ಷಿಕೆ ನಡೆಸಿ ಜನಸಾಮಾನ್ಯರಿಗೆ ಮತದಾನದ ಕುರಿತು ಮಾಹಿತಿ ಒದಗಿಸಿ ಮಾತನಾಡಿದ ಅವು, ವಿದ್ಯುನ್ಮಾನ ಮತಯಂತ್ರಗಳು ಹೆಗೆ ಕಾರ್ಯ ನಿರ್ವಹಿಸುತ್ತವೆ ಮತ್ತು ಅವುಗಳ ಮೂಲಕ ಸಾರ್ವಜನಿಕರು ಹೇಗೆ ಮತ ಚಲಾವಣೆ ಮಾಡಬೇಕೆಂಬುದರ ಕುರಿತು ಜಾಗೃತಿ ಮೂಡಿಸಿದರು.
ಕ್ಷೇತ್ರಾದ್ಯಂತ ಪ್ರತಿ ಗ್ರಾಮಗಳಲ್ಲಿ, ಬಸ್ ನಿಲ್ದಾಣಗಳಲ್ಲಿ, ಮಾರುಕಟ್ಟೆ ಹಾಗು ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಮತಗಟ್ಟೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಅಣುಕು ಮತದಾನದ ಬಳಿಕ ಮತ ಎಣಿಕೆ ಮಾಡಿ ಪ್ರಾತ್ಯಕ್ಷಕಿಕೆಯನ್ನು ತೋರಿಸಲಾಗುವದು. ಮತದಾರರು ತಮ್ಮ ಮತಗಟ್ಟೆ ಮಾಹಿತಿಯನ್ನು ಕೂಡ ತಿಳಿಸುವಲ್ಲಿ ಕಾರಣರಾದರು.