ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮಹಾರಾಷ್ಟ್ರ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಗೆ ಬೆಂಕಿ ಹಚ್ಚಿ ಧ್ವಂಸ ಮಾಡಲಾಗಿದೆ ಎಂದು ತಿಳಿದುಬಂದಿದೆ. ಶಾಸಕರ ಮನೆಯ ಹೊರಗೆ ನಿಲ್ಲಿಸಿದ್ದ ವಾಹನಕ್ಕೆ ಪ್ರತಿಭಟನಾಕಾರರು ಕಲ್ಲು ಎಸೆದು ಹಾನಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋಗಳು ವೈರಲ್ ಆಗಿದೆ.