ಶಿವಮೊಗ್ಗ: ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರ ಬೆನ್ನಲ್ಲೆ ಜನರನ್ನು ಚದುರಿಸಿ, ಕೆಲವರನ್ನ ವಶಕ್ಕೆ ಪಡೆದಿದ್ದರು. ಆನಂತರ ಕೆಲವು ಪೊಲೀಸರ ಮೇಲೂ ಕಲ್ಲು ತೂರಾಟ. ಈ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಎಸ್ ಪಿ ಮಿಥುನ್ ಕುಮಾರ್ ರವರ ಕಡೆಗೂ ಕಲ್ಲು ಬೀಸಿದ್ದಾರೆ. , ಅಲ್ಲಿದ್ದ ಮನೆಗಳು ಹಾಗೂ ವಾಹನಗಳ ಮೇಲೆ ಕಲ್ಲೂ ತೂರಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ಮಾಡಿದೆ.
ತಕ್ಷಣವೇ ಸ್ಥಳದಲ್ಲಿದ್ದ ಎಸ್ಪಿ ಮಿಥುನ್ ಕುಮಾರ್, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜನರು ಗುಂಪು ಸೇರದಂತೆ ಮನವಿ ಮಾಡಿದ್ದು ವದಂತಿಗಳಿಗೂ ಕಿವಿಗೊಡದಂತೆ ಮನವಿ ಮಾಡಿದ್ದಾರೆ. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಪೊಲೀಸರ ಕಂಟ್ರೋಲ್ನಲ್ಲಿ ಆರ್ಎಎಫ್ ಪಡೆ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ. ಘಟನೆಗಳ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ