80 ವರ್ಷ ಮೇಲ್ಪಟ್ಟಿರುವ ಮತ್ತು ವಿಕಲಚೇತನರಿಗೆ ಮನೆಯಲ್ಲೇ ಮತದಾನದ ಅವಕಾಶ

ಚುನಾವಣ ಆಯೋಗ
Advertisement

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ನಡೆಸಿರುವ ಸಿದ್ಧತೆಯ ಕುರಿತು ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗಿತ್ತು. ಈ ಬಾರಿ ಮತದಾನ ಪ್ರಮಾಣವನ್ನು ಏರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು ಜನಸಂಖ್ಯೆ 6.1 ಕೋಟಿ ಇದ್ದು, ಮೊದಲ ಬಾರಿಯ ಮನೆಯಲ್ಲೇ‌ ಮತದಾನ ಮಾಡುವ ಅವಕಾಶವನ್ನೂ ಈ ಬಾರಿ ನೀಡಲಾಗುತ್ತದೆ. 80 ವರ್ಷ ಮೇಲ್ಪಟ್ಟಿರುವ ಮತ್ತು ವಿಕಲಚೇತನರಿಗೆ ಮನೆಯಲ್ಲೇ ಮತದಾನದ ‌ಮಾಡುವ ಅವಕಾಶ ಇರಲಿದೆ. ಮತಗಟ್ಟೆಗೆ ಬರಲು ಸಾದ್ಯವಾಗದವರಿಗೆ ವಯೋವೃದ್ದರು, ಅಂಗವಿಕಲರಿಗೆ ಮನೆಯಲ್ಲೇ ವೋಟಿಂಗ್ ಸೌಲಭ್ಯ ಇರಲಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹಲವಾರು ಮಾಹಿತಿ ಸಂಗ್ರಹ ಮಾಡಿದ್ದೇವೆ. ಮೇ. 24ರ ಒಳಗಾಗಿ ಹೊಸ ಸರ್ಕಾರ ರಚನೆಯಾಗಬೇಕಿದೆ ಎಂದರು.